ನರಹರಿ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆಯ ವಿಶೇಷ ತೀರ್ಥಸ್ನಾನ: ಕೇರಳ, ತಮಿಳುನಾಡಿನಿಂದಲೂ ಭಕ್ತರ ದಂಡು

ಬಂಟ್ವಾಳ: ನರಹರಿ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆಯ ಪ್ರಯುಕ್ತ ಇಂದು ವಿಶೇಷ ತೀರ್ಥಸ್ನಾನ ನಡೆಯಿತು. ಪವಿತ್ರ ತೀರ್ಥಸ್ನಾನಕ್ಕಾಗಿ ಕರ್ನಾಟಕದ ವಿವಿಧ ಭಾಗಗಳಲ್ಲದೆ ಕೇರಳ ಹಾಗೂ ತಮಿಳುನಾಡಿನಿಂದಲೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದರು.

ನರಹರಿ ಪರ್ವತ ಬಂಡೆ ನಡುವೆ ಶಂಖ, ಗದಾ,ಚಕ್ರ, ಪದ್ಮ, ತೀರ್ಥ ಕುಂಡದಲ್ಲಿ ಭಕ್ತರಿಗೆ ತೀರ್ಥಸ್ನಾನ ಮಾಡಲು ಅವಕಾಶ ಕಲ್ಪಿಸಲಾಗಿತ್ತು.
ಬೆಳಗ್ಗಿನಿಂದಲೇ ದೇವಸ್ಥಾನದಲ್ಲಿ ಭಕ್ತರ ದಂಡು ಕಂಡುಬಂದಿದ್ದು, ಭಕ್ತರು ಪವಿತ್ರ ತೀರ್ಥಸ್ನಾನ ನೆರವೇರಿಸಿ ದೇವಳದಲ್ಲಿ ಮಹಾಗಣಪತಿ ಮತ್ತು ಸದಾಶಿವ ದೇವರಿಗೆ ವಿಶೇಷ ಪೂಜೆ ನಡೆಯಿತು.

ಆಟಿ ಅಮಾವಾಸ್ಯೆಯ ಧಾರ್ಮಿಕ ಮಹತ್ವದ ಹಿನ್ನೆಲೆಯಲ್ಲಿ ದೇವಸ್ಥಾನದ ಸುತ್ತಮುತ್ತ ಭಕ್ತರಿಂದ ಕಿಕ್ಕಿರಿದ ವಾತಾವರಣ ನಿರ್ಮಾಣವಾಗಿತ್ತು.
